ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಅಲ್ಪಸಂಖ್ಯಾತರ ಬಗ್ಗೆ ಕಾಂಗ್ರೆಸ್‌ನ ‘ನಾಟಕ’ ಬಯಲು – ಉಪಚುನಾವಣೆ ಸಿಎಂಗೆ ಕಠಿಣ ಸವಾಲು: ವಿಜಯೇಂದ್ರ

On: April 6, 2026 1:55 PM
Follow Us:

ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳಿಗೆ “ಕಬ್ಬಿಣದ ಕಡಲೆ”ಯಾಗಿ ಪರಿಣಮಿಸಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಗ್ಯಾರಂಟಿಗಳ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದ್ದು, ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬ ಗೊಂದಲದಲ್ಲಿ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸದಸ್ಯರು ತೊಡಗಿದ್ದಾರೆ ಎಂದು ವಿಶ್ಲೇಷಿಸಿದರು.

ದಾವಣಗೆರೆಯ ಮತದಾರರ ಆಕ್ರೋಶವು ರಾಜ್ಯದ ಮುಂದಿನ ರಾಜಕೀಯ ದಿಕ್ಕನ್ನು ಸೂಚಿಸುತ್ತಿದ್ದು, ಇದು ಬಿಜೆಪಿಗೆ ವರದಾನವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಬಗ್ಗೆ ತೋರಿಸುತ್ತಿರುವ ಕಾಳಜಿ ಕೇವಲ ‘ಮೊಸಳೆಕಣ್ಣೀರು’ ಮಾತ್ರವಾಗಿದ್ದು, ಈ ನಾಟಕ ಈಗ ಅಲ್ಪಸಂಖ್ಯಾತ ಸಮುದಾಯಕ್ಕೂ ಸ್ಪಷ್ಟವಾಗಿದೆ ಎಂದು ಹೇಳಿದರು.

17 ಬಾರಿ ಬಜೆಟ್ ಮಂಡಿಸಿದ ಅನುಭವ ಹೊಂದಿರುವ ಮುಖ್ಯಮಂತ್ರಿಯಾಗಿದ್ದರೂ, ಆ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಟೀಕಿಸಿದರು. ಕಳೆದ ಮೂರು ವರ್ಷಗಳಲ್ಲಿ ಯಾವುದೇ ಗಣನೀಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲದ ಕಾಂಗ್ರೆಸ್ ಸರ್ಕಾರ, ತನ್ನ ಗ್ಯಾರಂಟಿ ಯೋಜನೆಗಳನ್ನೇ ಅಭಿವೃದ್ಧಿಯಂತೆ ಬಿಂಬಿಸುತ್ತಿರುವುದು ದುರಂತಕರ ಎಂದು ಹೇಳಿದರು.

ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ನಿರಂತರವಾಗಿ ಆರೋಪ ಮಾಡುವ ಪ್ರವೃತ್ತಿ ಕಾಂಗ್ರೆಸ್ ನಾಯಕರಲ್ಲಿ ಕಾಣಿಸುತ್ತಿದೆ. ಆದರೆ ವಾಸ್ತವದಲ್ಲಿ ರಾಜ್ಯ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಜನರು ಇದನ್ನು ಸ್ಪಷ್ಟವಾಗಿ ಅರಿತುಕೊಂಡಿದ್ದಾರೆ ಎಂದು ಅವರು ಹೇಳಿದರು.

ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಕಡೆಗಣಿಸಿದ್ದು, ಇದೀಗ ಅಲ್ಪಸಂಖ್ಯಾತರನ್ನೂ ನಿರ್ಲಕ್ಷ್ಯ ಮಾಡುತ್ತಿರುವುದು ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ ಎಂದು ವಿಜಯೇಂದ್ರ ಹೇಳಿದರು.

ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಶಕ್ತಿ ಮೀರಿ ದುಡಿಯುತ್ತಿದ್ದು, ಎಲ್ಲ ಮುಖಂಡರು ಒಗ್ಗಟ್ಟಿನಿಂದ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಜೆಡಿಎಸ್ ಕಾರ್ಯಕರ್ತರೂ ಸಹ ಬೆಂಬಲ ನೀಡುತ್ತಿದ್ದಾರೆ. ಕಾಂಗ್ರೆಸ್ ಹಣದ ಆಮಿಷಕ್ಕೆ ಮತದಾರರು ಒಳಗಾಗುವುದಿಲ್ಲ ಎಂಬ ನಂಬಿಕೆ ಇದೆ. ಈ ಬಾರಿ ಐತಿಹಾಸಿಕ ಗೆಲುವು ನಮ್ಮದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಾಗಲಕೋಟೆಯಲ್ಲಿಯೂ ದಿನರಾತ್ರಿ ಬಿಜೆಪಿ ಕಾರ್ಯಕರ್ತರು ಶ್ರಮಿಸುತ್ತಿದ್ದು, ಈ ಉಪಚುನಾವಣೆ ಕಾಂಗ್ರೆಸ್ ಪಕ್ಷದ ವೇಗಕ್ಕೆ ಕಡಿವಾಣ ಹಾಕಲಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಜಯಶಾಲಿಗಳಾಗಲಿದ್ದಾರೆ ಎಂದು ಅವರು ಹೇಳಿದರು.

ಇದೇ ವೇಳೆ, ಏಪ್ರಿಲ್ 6, 1980ರಂದು ಸ್ಥಾಪಿತವಾದ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ರಾಜ್ಯದ 224 ಕ್ಷೇತ್ರಗಳಲ್ಲಷ್ಟೇ ಅಲ್ಲದೆ ದೇಶದಾದ್ಯಂತ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಬಿಜೆಪಿ ಇಂದು ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ ಎಂದು ವಿಜಯೇಂದ್ರ ವಿವರಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ದಾವಣಗೆರೆ ಶೋಭಾಯಾತ್ರೆಯಲ್ಲಿ ಜನಸಾಗರ: ಬಿಜೆಪಿ ಗೆಲುವಿಗೆ ಸುನಾಮಿ ಅಲೆ ಎಂದ ವಿಜಯೇಂದ್ರ

ಸಿಎಂಗೆ ಸೋಲಿನ ಭಯ, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ: ಯಡಿಯೂರಪ್ಪ–ಬೊಮ್ಮಾಯಿ ವಿಶ್ವಾಸ, ಕುಟುಂಬ ರಾಜಕಾರಣ ವಿರುದ್ಧ ಜೋಶಿ ವಾಗ್ದಾಳಿ

ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಕುಕ್ಕವಾಡದಲ್ಲಿ ಸಮರ್ಥ್ ಶಾಮನೂರು ಪರ ಭರ್ಜರಿ ಮತಯಾಚನೆ

ಶಿವಮೊಗ್ಗದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ: “ಸಿದ್ಧಾಂತಗಳೇ ಪಕ್ಷದ ಶಕ್ತಿ, ಕಾರ್ಯಕರ್ತರ ಶ್ರಮವೇ ಬಲ”- ಆರ್.ಕೆ. ಸಿದ್ದರಾಮಣ್ಣ

ಬಾಗಲಕೋಟೆಯಲ್ಲಿ ಬಿಜೆಪಿ ಗೆಲುವು ಖಚಿತ; ಸಿದ್ದರಾಮಯ್ಯ ಆಡಳಿತದ ವಿರುದ್ಧ ಜನರ ಅಸಮಾಧಾನ ಸ್ಫೋಟ: ಯಡಿಯೂರಪ್ಪ ವಾಗ್ದಾಳಿ

ರಾಜ್ಯದಲ್ಲಿ ಆಡಳಿತ ಕುಸಿತ; ಗ್ಯಾರಂಟಿ ಹೊರತುಪಡಿಸಿ ಸರ್ಕಾರದ ಅಭಿವೃದ್ಧಿ ಶೂನ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

Leave a Comment