ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ರೈತ ಸಂಘಟನೆಯಿಂದ ಮಾತ್ರ ರೈತರ ಹಕ್ಕುಗಳ ರಕ್ಷಣೆ ಸಾಧ್ಯ: ಹೆಚ್.ಆರ್. ಬಸವರಾಜಪ್ಪ

On: May 3, 2026 10:04 PM
Follow Us:

ಭದ್ರಾವತಿ: “ಇಂದಿನ ಬದಲಾಗುತ್ತಿರುವ ಜಾಗತಿಕ ಸನ್ನಿವೇಶದಲ್ಲಿ ಪ್ರತಿಯೊಂದು ವರ್ಗಕ್ಕೂ ತನ್ನದೇ ಆದ ಸಂಘಟನೆಗಳಿವೆ. ಅದೇ ರೀತಿ ರೈತರಿಗೆ ರೈತ ಸಂಘವು ಅತ್ಯವಶ್ಯಕವಾಗಿದ್ದು, ಸಂಘಟಿತ ಹೋರಾಟದಿಂದ ಮಾತ್ರ ರೈತರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಮತ್ತು ಹಕ್ಕುಗಳನ್ನು ಪಡೆಯಲು ಸಾಧ್ಯ,” ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ ಅವರು ಹೇಳಿದರು.

ತಾಲ್ಲೂಕಿನ ಇಟ್ಟಿಗೆಹಳ್ಳಿ ಕ್ಯಾಂಪ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ರೈತ ಸಂಘದ ಗ್ರಾಮ ಘಟಕ ಹಾಗೂ ನಾಮಫಲಕ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಉದಾರೀಕರಣ ಮತ್ತು ಖಾಸಗೀಕರಣದ ನೀತಿಗಳಿಂದಾಗಿ ಭಾರತೀಯ ರೈತರು ಇಂದು ಜಾಗತಿಕ ಮಟ್ಟದ ಪೈಪೋಟಿ ಎದುರಿಸುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, “ಅಮೇರಿಕಾದಂತಹ ದೇಶಗಳು ಹೆಚ್ಚಿನ ಸುಂಕ ವಿಧಿಸುತ್ತಿದ್ದರೆ, ಇತ್ತ ಮುಕ್ತ ವಾಣಿಜ್ಯ ಒಪ್ಪಂದಗಳ ನೆಪದಲ್ಲಿ ಸುಂಕವಿಲ್ಲದೆ ವಿದೇಶಿ ಕೃಷಿ ಉತ್ಪನ್ನಗಳು ಭಾರತಕ್ಕೆ ಲಗ್ಗೆ ಇಡುತ್ತಿವೆ. ಇದು ಸ್ಥಳೀಯ ರೈತರ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿದೆ,” ಎಂದರು.

ಇತ್ತೀಚಿನ ಪ್ರಕೃತಿ ವಿಕೋಪದಿಂದಾಗಿ ಜಿಲ್ಲೆಯ ರೈತರು ಕಂಗಾಲಾಗಿದ್ದು, ಸರ್ಕಾರಕ್ಕೆ ಈ ಕೆಳಗಿನ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು:

  • ಪರಿಹಾರದ ಮೊತ್ತ ಹೆಚ್ಚಳ: NDRF ಮತ್ತು SDRF ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡಿ, ಬೆಳೆ ಹಾನಿಗೆ ಎಕರೆಗೆ ಕನಿಷ್ಠ 50 ಸಾವಿರ ರೂ. ಪರಿಹಾರ ನೀಡಬೇಕು.
  • ವಸತಿ ನೆರವು: ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಕನಿಷ್ಠ 5 ಲಕ್ಷ ರೂ. ಧನಸಹಾಯ ನೀಡಬೇಕು.
  • ಸಾಲ ಸೌಲಭ್ಯ: ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಮತ್ತು ಕೃಷಿ ಚಟುವಟಿಕೆಗಳಿಗೆ ಬಡ್ಡಿರಹಿತ ಹೊಸ ಸಾಲಗಳನ್ನು ವಿತರಿಸಬೇಕು.
  • ವಿಮೆ ಬಿಡುಗಡೆ: ಬಾಕಿ ಇರುವ ಬೆಳೆ ವಿಮೆ ಪರಿಹಾರದ ಹಣವನ್ನು ವಿಳಂಬ ಮಾಡದೆ ತಕ್ಷಣವೇ ರೈತರ ಖಾತೆಗೆ ಜಮೆ ಮಾಡಬೇಕು.

“ಈಗಾಗಲೇ ಈ ಎಲ್ಲಾ ವಿಷಯಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಒಂದು ವೇಳೆ ಸರ್ಕಾರ ರೈತರ ಈ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ರೂಪಿಸಲಾಗುವುದು,” ಎಂದು ಅವರು ಎಚ್ಚರಿಕೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ.ಎಂ. ಚಂದ್ರಪ್ಪ, ರಾಜ್ಯ ಮಹಿಳಾ ಸಂಚಾಲಕರಾದ ಭಾಗ್ಯ ರಾಘವೇಂದ್ರ, ಜಿಲ್ಲಾಧ್ಯಕ್ಷರಾದ ಕೆ. ರಾಘವೇಂದ್ರ, ಮತ್ತು ಜಿಲ್ಲಾ ಕಾರ್ಯದರ್ಶಿ ಗುರುಶಾಂತಪ್ಪ ಅವರು ಸಂಘಟನೆಯ ಬಲವರ್ಧನೆ ಕುರಿತು ಮಾತನಾಡಿದರು.

​ಈ ಸಂದರ್ಭದಲ್ಲಿ ಜಿಲ್ಲಾ ಹಸಿರುಸೇನೆ ಸಂಚಾಲಕ ಎಂ.ಡಿ. ನಾಗರಾಜ್, ಭದ್ರಾವತಿ ತಾಲ್ಲೂಕು ಅಧ್ಯಕ್ಷ ಜಿ.ಎನ್. ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಸಿ.ಬಿ. ಹನುಮಂತಪ್ಪ, ಶಿವಮೊಗ್ಗ ತಾಲ್ಲೂಕು ಅಧ್ಯಕ್ಷ ಸಿ. ಚಂದ್ರಪ್ಪ ಹಾಗೂ ಗ್ರಾಮ ಘಟಕದ ಪದಾಧಿಕಾರಿಗಳು, ಇಟ್ಟಿಗೆಹಳ್ಳಿ ಕ್ಯಾಂಪ್‌ನ ಗ್ರಾಮಸ್ಥರು ಮತ್ತು ನೂರಾರು ರೈತರು ಭಾಗವಹಿಸಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಶಿವಮೊಗ್ಗದಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಚಾಲನೆ: ಪತ್ರಕರ್ತ ಕೆ.ಎಂ. ಸತೀಶ್ ಗೌಡ ಅವರಿಗೆ ಸಂಸದ ಬಿ.ವೈ. ರಾಘವೇಂದ್ರರಿಂದ ತ್ರಿವರ್ಣ ಧ್ವಜ ವಿತರಣೆ

ಶಿವಮೊಗ್ಗದಲ್ಲಿ ಮೊಳಗಿದ ದೇಶಭಕ್ತಿಯ ಘೋಷಣೆ: ಸಾವಿರಾರು ವಿದ್ಯಾರ್ಥಿಗಳಿಂದ ತಿರಂಗಾ ಯಾತ್ರೆ

ಕಾವೇರಿ ನೀರು ತಮಿಳುನಾಡಿಗೆ ಹರಿಸಬೇಡಿ; ಬಿಟ್ಟರೆ ರಾಜ್ಯಾದ್ಯಂತ ಹೋರಾಟ: ಹೆಚ್.ಆರ್. ಬಸವರಾಜಪ್ಪ ಎಚ್ಚರಿಕೆ

ಅಡಕೆ ಬೆಳೆಗಾರರ ಬದುಕಿನ ಮೇಲೆ ‘ಪಾನ್‌ ನಿಷೇಧ’ದ ಹೊಡೆತ; ರೈತರ ಬೆನ್ನಿಗೆ ಚೂರಿ ಹಾಕಿದ ಸರ್ಕಾರ: ಏಕಾಏಕಿ ನಿರ್ಧಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಆಕ್ರೋಶ

ಧೈರ್ಯವಿದ್ದರೆ ನೇರವಾಗಿ ಆರ್‌ಎಸ್‌ಎಸ್‌ ನಿಷೇಧಿಸಿ!: ಮಹಿಳೆಯರಿಗೆ ಸಂಪುಟದಲ್ಲಿ ಅವಕಾಶವಿಲ್ಲ, ಆರೋಪ ಎದುರಿಸುವವರಿಗೆ ಸಚಿವ ಪಟ್ಟ! ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಶಿವಮೊಗ್ಗದ ಸಾರ್ವಜನಿಕ ಸಾರಿಗೆಗೆ ಹೊಸ ವೇಗ: 50 ಪಿಎಂ ಇ-ಬಸ್‌ಗಳನ್ನು ಶೀಘ್ರ ರಸ್ತೆಗಿಳಿಸಲು ಸಾರಿಗೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ

Leave a Comment