ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ: ಬಿ.ವೈ. ವಿಜಯೇಂದ್ರ ವಿಶ್ವಾಸ

On: May 5, 2026 8:22 PM
Follow Us:

ದಾವಣಗೆರೆ: “ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿಯ ಗತವೈಭವದ ದಿನಗಳು ಮತ್ತೆ ಮರುಕಳಿಸಲಿವೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಉಪಚುನಾವಣೆಯ ಸೋಲಿನ ಪರಾಮರ್ಶೆ ನಡೆಸಲು ಹಾಗೂ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ತುಂಬಲು ದಾವಣಗೆರೆಗೆ ಭೇಟಿ ನೀಡಿದ ಅವರು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ನಿವಾಸದಲ್ಲಿ ಜಿಲ್ಲಾ ನಾಯಕರೊಂದಿಗೆ ಪಕ್ಷ ಸಂಘಟನೆಯ ಕುರಿತು ಮಹತ್ವದ ಚರ್ಚೆ ನಡೆಸಿದರು.

ಕ್ಷೇತ್ರದಲ್ಲಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರನ್ನು ಶ್ಲಾಘಿಸಿದ ವಿಜಯೇಂದ್ರ ಅವರು, “ಒಬ್ಬ ಸಾಮಾನ್ಯ ಕಾರ್ಯಕರ್ತ 63,000ಕ್ಕೂ ಅಧಿಕ ಮತಗಳನ್ನು ಪಡೆಯುವುದು ಸಾಮಾನ್ಯದ ಮಾತಲ್ಲ. ಸೋಲಿನಿಂದ ಧೃತಿಗೆಡಬಾರದು, ಆಗುವುದೆಲ್ಲವೂ ಒಳ್ಳೆಯದಕ್ಕೆ ಎಂದು ಭಾವಿಸಿ ಮುಂದಡಿ ಇಡಬೇಕು,” ಎಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಭಾವುಕರಾದ ಶ್ರೀನಿವಾಸ ದಾಸಕರಿಯಪ್ಪ ಅವರನ್ನು ಸಂತೈಸಿದ ರಾಜ್ಯಾಧ್ಯಕ್ಷರು, ಪಕ್ಷವು ಅವರ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು.

ಉಪಚುನಾವಣೆಯ ಹಿನ್ನಡೆಯ ಬಗ್ಗೆ ಮಾತನಾಡಿದ ಅವರು ಕೆಲವು ಮಹತ್ವದ ಅಂಶಗಳನ್ನು ಹಂಚಿಕೊಂಡರು:

  • ಆಡಳಿತ ಯಂತ್ರದ ಬಳಕೆ: ಸಾಮಾನ್ಯವಾಗಿ ಉಪಚುನಾವಣೆಗಳು ಆಡಳಿತ ಪಕ್ಷದ ಪರವಾಗಿರುತ್ತವೆ. ಮುಖ್ಯಮಂತ್ರಿಗಳು ಮತ್ತು ಸಚಿವರು ಹದಿನೈದು ದಿನಗಳ ಕಾಲ ಬೀಡುಬಿಟ್ಟು ಪ್ರಚಾರ ನಡೆಸಿರುವುದು ಫಲಿತಾಂಶದ ಮೇಲೆ ಪ್ರಭಾವ ಬೀರಿದೆ.
  • ಅನಿರೀಕ್ಷಿತ ಫಲಿತಾಂಶ: ನಾವು ದಾವಣಗೆರೆ ದಕ್ಷಿಣದಲ್ಲಿ 70 ಸಾವಿರಕ್ಕೂ ಹೆಚ್ಚು ಮತಗಳ ನಿರೀಕ್ಷೆಯಲ್ಲಿದ್ದೆವು. ಆದರೆ ಅದೃಷ್ಟ ಈ ಬಾರಿ ನಮಗೆ ಕೈಕೊಟ್ಟಿದೆ.
  • ಗ್ಯಾರಂಟಿ ಯೋಜನೆಗಳ ಪ್ರಭಾವ: ಕಾಂಗ್ರೆಸ್ ಸರ್ಕಾರವು ಚುನಾವಣಾ ಲಾಭಕ್ಕಾಗಿ ‘ಗೃಹಲಕ್ಷ್ಮಿ’ ಯೋಜನೆಯ ಬಾಕಿ ಕಂತುಗಳನ್ನು ಮತದಾನದ ಹೊತ್ತಿಗೆ ಬಿಡುಗಡೆ ಮಾಡುತ್ತಿದೆ. ಈ ‘ಗೃಹಲಕ್ಷ್ಮಿ’ ಈಗ ಕಾಂಗ್ರೆಸ್‌ಗೆ ‘ಚುನಾವಣಾ ಲಕ್ಷ್ಮಿ’ಯಾಗಿದ್ದಾಳೆ ಎಂದು ಲೇವಡಿ ಮಾಡಿದರು.

“ನನ್ನ ತಂದೆ ಬಿ.ಎಸ್. ಯಡಿಯೂರಪ್ಪನವರು ಇಂತಹ ನೂರಾರು ಸವಾಲುಗಳನ್ನು ದಿಟ್ಟತನದಿಂದ ಎದುರಿಸಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅವರ ಮಗನಾಗಿ ನಾನು ಕೂಡ ಅಷ್ಟೇ ಛಲದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ,” ಎಂದು ವಿಜಯೇಂದ್ರ ಗುಡುಗಿದರು. ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಶ್ರಮದಿಂದ ಬಿಜೆಪಿ ಬೆಳೆದ ಮಾದರಿಯಲ್ಲೇ ಕರ್ನಾಟಕದಲ್ಲೂ ಪಕ್ಷವು ಪುಟಿದೇಳಲಿದೆ ಎಂದರು.

ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗಳಿಗೆ ಈಗಿನಿಂದಲೇ ಸನ್ನದ್ಧರಾಗುವಂತೆ ಅವರು ಕರೆ ನೀಡಿದರು. ಆಡಳಿತ ಪಕ್ಷದ ಹಣದ ಬಲ ಮತ್ತು ಅಧಿಕಾರ ದುರುಪಯೋಗವನ್ನು ಮೆಟ್ಟಿ ನಿಲ್ಲಲು ಸಂಘಟನೆಯೇ ಅಂತಿಮ ಅಸ್ತ್ರ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಜಿಲ್ಲೆಯ ಪ್ರಮುಖ ಬಿಜೆಪಿ ನಾಯಕರು ಮತ್ತು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. ವಿಜಯೇಂದ್ರ ಅವರು ಶ್ರೀನಿವಾಸ್ ಅವರ ಮನೆಯಲ್ಲಿ ದೋಸೆ ಸವಿದು, ಮುಖಂಡರೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಬಿಎಸ್‌ವೈ ಅಭಿಮಾನೋತ್ಸವಕ್ಕೆ ‘ವೈದ್ಯಕೀಯ ಕವಚ’: ಲಕ್ಷಾಂತರ ಅಭಿಮಾನಿಗಳ ಪಾಲಿಗೆ ಸಂಜೀವಿನಿಯಾದ ಡಾ.ಲಕ್ಷ್ಮಣ್, ಡಾ. ಚನ್ನಮಲ್ಲಯ್ಯ, ಡಾ.ನಾರಾಯಣ್ ತಂಡ

ಇಂಧನ ಉಳಿತಾಯಕ್ಕೆ ಪ್ರಧಾನಿ ಮೋದಿ ಮಾದರಿ: ಎಸ್‌ಪಿಜಿ ಬೆಂಗಾವಲು ಪಡೆಯಲ್ಲಿ 50% ಕಡಿತಕ್ಕೆ ಸೂಚನೆ

ದೇಶಕ್ಕೆ ಬುದ್ಧಿ ಹೇಳುವ ಕೇಂದ್ರಕ್ಕೆ ಒಂದು ಪರೀಕ್ಷೆ ನಡೆಸಲಾಗುತ್ತಿಲ್ಲವೇ? : ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಬಸವೇಶ್ವರ ಸೊಸೈಟಿಯ ಶತಮಾನೋತ್ಸವ ಸಂಭ್ರಮ: ಮೇ 16 ಮತ್ತು 17ರಂದು ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ

ವೈದ್ಯಕೀಯ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ನೀಟ್ 2026 ರದ್ದು; ಶೀಘ್ರದಲ್ಲೇ ಮರುಪರೀಕ್ಷೆಯ ಹೊಸ ದಿನಾಂಕ ಘೋಷಣೆ

ಬಿಎಸ್‌ವೈ ಅಭಿಮಾನೋತ್ಸವದ ಅಭೂತಪೂರ್ವ ಯಶಸ್ಸು: ನಾಡಿನ ಜನತೆ ಹಾಗೂ ಆಗಮಿಸಿದ ಗಣ್ಯರಿಗೆ ಸಂಸದ ಬಿ.ವೈ. ರಾಘವೇಂದ್ರ ಕೃತಜ್ಞತೆ

Leave a Comment